ರಾಜ್ಯಸಭಾ ನಾಮಪತ್ರದಲ್ಲಿ ಜ್ಯೋತಿರಾಧಿತ್ಯ ಸಿಂಧಿಯಾರಿಂದ ಸುಳ್ಳು ಮಾಹಿತಿ : ಕಾಂಗ್ರೆಸ್ ನಿಂದ ದೂರು

ಮಧ್ಯಪ್ರದೇಶ : ಕಳೆದ ಕೆಲ ದಿನಗಳಿಂದ ಕಾಂಗ್ರೆಸ್ ತೊರೆದು ಬಿಜೆಪಿಗೆ ಸೇರ್ಪಡೆಯಾಗಿರುವ ಜ್ಯೋತಿರಾಧಿತ್ಯ ಸಿಂಧಿಯಾ ಅವರನ್ನು ಬಿಜೆಪಿ ರಾಜ್ಯಸಭಾ ಅಭ್ಯರ್ಥಿಯಾಗಿ ಘೋಷಿಸಿದೆ. ಈ ಹಿನ್ನೆಲೆಯಲ್ಲಿ ಜ್ಯೋತಿರಾಧಿತ್ಯ ಸಿಂಧಿಯಾ ನಾಮಪತ್ರ ಸಲ್ಲಿಸಿದ್ದು, ಈ ಉಮೇದುವಾರಿಕೆಯಲ್ಲಿ ಅವರು ತಮ್ಮ ಮೇಲಿರುವ ಸಹಿ ನಕಲು ಮಾಡಿರುವ ಪ್ರಕರಣದ ಕುರಿತು ಮಾಹಿತಿ ನೀಡಿಲ್ಲ ಎಂದು ಕಾಂಗ್ರೆಸ್​ ಆರೋಪಿಸಿದೆ.

ಜ್ಯೋತಿರಾದಿತ್ಯ ಸಿಂಧಿಯಾ ವಿರುದ್ಧ 2014ರಲ್ಲಿ ಆರ್ಥಿಕ ಅಪರಾಧ ವಿಭಾಗ ಭೂ ಕಬಳಿಕೆ ಪ್ರಕರಣ ದಾಖಲಿಸಿತ್ತು. ನಕಲಿ ಸಹಿ ಹಾಕುವ ಮೂಲಕ ಭೂ ಕಬಳಿಕೆ ಮಾಡಿದ್ದರು ಎಂಬ ಆರೋಪ ಕೇಳಿಬಂದಿತ್ತು. ಆದರೆ, ಸೂಕ್ತ ಸಾಕ್ಷ್ಯಾಧಾರ ಇಲ್ಲದ ಕಾರಣ ಈ ಪ್ರಕರಣವನ್ನು 2018ರಲ್ಲಿ ಕೈಬಿಡಲಾಗಿತ್ತು. ಆದರೆ, ಈ ಕುರಿತಾದ ಮಾಹಿತಿಯನ್ನು ರಾಜ್ಯಸಭಾ ಅಭ್ಯರ್ಥಿಗಳಾದ ಜ್ಯೋತಿರಾದಿತ್ಯ ಸಿಂಧಿಯಾ ತಮ್ಮ ನಾಮಪತ್ರದಲ್ಲಿ ತಿಳಿಸಿಲ್ಲ ಎಂದು ಕಾಂಗ್ರೆಸ್ ದೂರಿದೆ.

ಅಲ್ಲದೇ ಈ ಕುರಿತು ಚುನಾವಣಾ ಆಯೋಗದ ರಿಟರ್ನಿಂಗ್ ಆಫೀಸರ್ ಎದುರು ತಮ್ಮ ಆಕ್ಷೇಪಣೆಯನ್ನು ಲಿಖಿತ ರೂಪದಲ್ಲಿ ಕಾಂಗ್ರೆಸ್ ದಾಖಲಿಸಿದೆ….

Share
WhatsApp
Follow by Email