ಬಾಗಲಕೋಟೆ ಜಿಲ್ಲೆಯಲ್ಲಿ ಮೂರು ದಿನದಿಂದ ಯಾವುದೇ ಪಾಸಿಟಿವ್ ರೋಗಿಗಳ ಕಂಡು ಬಂದಿಲ್ಲ: ಜಿಲ್ಲಾಧಿಕಾರಿ ಕ್ಯಾ ಕೆ. ರಾಜೇಂದ್ರ

ಜಮಖಂಡಿ: ಬಾಗಲಕೋಟೆ ಜಿಲ್ಲೆಯಲ್ಲಿ ಮೂರು ದಿನದಿಂದ ಯಾವುದೇ ಪಾಸಿಟಿವ್ ರೋಗಿಗಳ ಕಂಡು ಬಂದಿಲ್ಲ, ಚಿಕಿತ್ಸೆ ಪಡೆದುಕೊಂಡ ಗುಣಮುಖರಾಗಿರುವ 6 ಜನರನ್ನು ಡಿಸ್‌ಸಾರ್ಜ್ ಮಾಡುವ ಪ್ರಕ್ರೀಯೆ ನಡೆದಿದೆ ವರದಿಗಾಗಿ ಕಾಯುತ್ತಿದ್ದೇವೆ ಎಂದು ಜಿಲ್ಲಾಧಿಕಾರಿ ಕ್ಯಾ ಕೆ. ರಾಜೇಂದ್ರ ಹೇಳಿದರು.
ನಗರದ ಬಾರ್ಪೆಟ್‌ಗಲ್ಲಿ ಹಾಗೂ ಅವಟಿಗಲ್ಲಿಯ ನಿಷೇಧಿತ ವಲಯಕ್ಕೆ ಭೆಟ್ಟಿ ನೀಡಿ ನಂತರ ಸುದ್ದಿಗಾರರ ಜೊತೆ ಮಾತನಾಡಿದರು.
ಜಿಲ್ಲೆ ರೆಡ್ ಜೋನ್‌ನಲ್ಲಿರುವುದರಿಂದ ಕೃಷಿ ಕೃಷಿ ಯೇತರ ಚಟುವಟಿಕೆ ಹೊರತು ಪಡಿಸಿ ಎಲ್ಲವನ್ನು ಬಂದ ಇಡಲಾಗುವುದು ಗ್ರೀನ್ ಜೋನ್ ನಮ್ಮಲ್ಲಿ ಅನ್ವಯಿಸುವದಿಲ್ಲ ಎಂದರು.
ಕೊನೆಯದಾಗಿ ಪಾಸಿಟಿವ್ ಬಂದ ರೋಗಿಯಿಂದ 28 ದಿನಗಳವರೆಗೆ ಲಾಕ್‌ಡೌನ್ ಮುಂದುವರೆಯಲಿದೆ ಎಂದರು.
ರಮಜಾನ್ ಇದ್ದರೂ ಮನೆಯಲ್ಲೆ ಆಚರಿಸಬೇಕು, ಕೊರೋನಾ ವೈರಸ್ ಯಾವುದೆ ಒಂದು ಕೋಮಿಗೆ ಬರುವದಿಲ್ಲ ಎಲ್ಲ ಧರ್ಮದವರಿಗೂ ಬರುತ್ತದೆ, ಕೋಮು ಸೌಹಾರ್ದತೆ ಕಾಪಾಡಿಕೊಳ್ಳಬೇಕು ಎಂದರು.
ಜಮಖAಡಿಯಲ್ಲಿ ಪಾಸಿಟಿವ್ ಬಂದಿದ್ದರಿAದ ವೈದ್ಯರು ಹೆದರಿದ್ದಾರೆ, ಐಎಂಎ ಅಧ್ಯಕ್ಷರಿಗೆ ನಗರದಲ್ಲಿ ಖಾಸಗಿ ಆಸ್ಪತ್ರೆಗಳು ತೆರೆಯುವಂತೆ ನಿರ್ದೇಶನ ನೀಡಲಾಗುವುದು ಎಂದರು.
ಬಾಗಲಕೋಟೆ ನಗರದಲ್ಲಿ ನಿಷೇಧಿತ ವಲಯದಲ್ಲಿನ ನಿವಾಸಿಗೆ 30 ದಿನದಿಂದ 30 ಸಾವಿರ ಜನರಿಗೆ ಅಗತ್ಯ ವಸ್ತುಗಳನ್ನು ಪೂರೈಸಲಾಗುತ್ತಿದೆ, ಜಮಖಂಡಿಯಲ್ಲೂ ಅಷ್ಟೆ ಯಾರಿಗೂ ತೊಂದರೆ ಆಗದಂತೆ ನೋಡಿಕೊಳ್ಳಲಾಗುತ್ತಿದೆ ಎಂದರು.
ಕೊರೋನಾ ಹರಡದಂತೆ ಕಟ್ಟುನಿಟ್ಟಾಗಿ ಕ್ರಮ ಜರುಗಿಸಲಾಗುತ್ತಿದೆ, ಇದಕ್ಕೆ ಸಾರ್ವಜನಿಕರು ಸಹಕಾರ ನೀಡಬೇಕು ಎಂದರು.
ಅನಾವಶ್ಯಕವಾಗಿ ಹೊರಗಡೆ ಗುಂಪು ಗೂಡಿ ನಿಲ್ಲುವುದು, ಕುಳಿತುಕೊಳ್ಳುವುದು, ಗಲ್ಲಿಗಳಲ್ಲಿ ಯಾರು ಅನಾವಶ್ಯಕವಾಗಿ ತಿರುಗಾಡದಂತೆ ನೋಡಿಕೊಳ್ಳಿ ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಅಗತ್ಯ ವಸ್ತುಗಳು ನಿಮ್ಮ ಮನೆ ಬಾಗಿಲಿಗೆ ಬರುತ್ತವೆ ಅವುಗಳನ್ನು ತಾವು ಖರೀದಿಸಿ ತೆಗೆದುಕೊಳ್ಳಬಹುದು ಎಂದರು.
ಎಸ್ಪಿ ಲೊಕೇಶ ಜಗಲಾಸರ ಮಾತನಾಡಿ, ಕೊರೊಂಟಾದಲ್ಲಿ ಇರುವ ಪೊಲೀಸ್ ಸಿಬ್ಬಂದಿಗಳನ್ನು ಕರ್ತವ್ಯಕ್ಕೆ ಹಾಜರಾಗಿಲ್ಲ. ಅವರೆಲ್ಲರನ್ನೂ ಲಾಡ್ಜ್ಗಳಲ್ಲಿ ಕೊರೊಂಟೈನ್‌ನಲ್ಲಿ ಇಡಲಾಗಿದೆ ಎಂದರು.
ಸಿಬ್ಬAದಿಗಳ ಕೊರತೆ ಇರುವದರಿಂದ ಜಮಖಂಡಿಗೆ 20 ಜನ ಸಿಬ್ಬಂದಿಗಳನ್ನು ನಿಯೋಜಿಸಲಾಗುವುದು ಎಂದರು.
ಈ ಸಂದರ್ಭದಲ್ಲಿ ಎಸಿ ಡಾ. ಸಿದ್ದು ಹುಲ್ಲೋಳಿ, ಡಿವೈಎಸ್‌ಪಿ ಆರ್.ಕೆ.ಪಾಟೀಲ, ತಹಸೀಲ್ದಾರ ಸಂಜಯ ಇಂಗಳೆ, ತಾಪಂ ಇಓ ಸಂಜು ಹಿಪ್ಪರಗಿ, ತಾಲೂಕಾ ಆರೋಗ್ಯಾಧಿಕಾರಿ ಡಾ. ಜಿ.ಎಸ್. ಗಲಗಲಿ ಪೌರಾಯುಕ್ತ ರಾಮಕೃಷ್ಣ ಸಿದ್ದನಕೊಳ್ಳ,ಸಿ.ಪಿ.ಐ.ಜಿ.ರುದ್ರೇಶಗೌಡ,ಪಿ.ಎಸ್.ಐ.ಬಸವರಾಜ ಅವಟಿ,ರವಿ ಶಿರಗುಪ್ಪಿ,ಉಮೇಶ ಜೋಶಿ ಇತರರು ಇದ್ದರು.

Share
WhatsApp
Follow by Email