ಕೂಲಿ ಕಾರ್ಮಿಕರಿಗೆ ಸ್ವಂತ ಹಣದಲ್ಲಿ ಆಹಾರ ಕಿಟ್ ವಿತರಣೆ : ದಳವಾಯಿ

ಕೂಲಿ ಕಾರ್ಮಿಕರಿಗೆ ಸ್ವಂತ ಹಣದಲ್ಲಿ ಆಹಾರ ಕಿಟ್ ವಿತರಣೆ : ದಳವಾಯಿ

ಮೂಡಲಗಿ : ಕೂಲಿ, ಕುಲಕಸುಬು ಮಾಡಿ ಜೀವನ ನಡೆಸುತ್ತಿರುವ ಬಡ ಕುಟುಂಬದ ಜನರಿಗೆ ಈ ಮಹಾಮಾರಿ ಕೊರೋನಾ ಹಿನ್ನೆಲೆ ಲಾಕ್‌ಡೌನ್ ಮಾಡಿದ್ದರಿಂದ ಕೆಲಸವಿಲ್ಲದೆ ಒಪ್ಪತ್ತಿನ ಊಟಕ್ಕೂ ಸಂಕಷ್ಟ ಎದುರಿಸುವಂತಾಗಿದೆ. ಇಂತಹ ಸಂದರ್ಭದಲ್ಲಿ ಅವರಿಗೆ ನೆರವು ನೀಡುವುದು ಪ್ರತಿಯೊಬ್ಬರ ಕತ್ಯರ್ವವಾಗಿದೆ ಎಂದು ಕಾಂಗ್ರೇಸ್ ಮುಖಂಡ ಅರವಿಂದ ದಳವಾಯಿ ಹೇಳಿದರು.

ಭಾನುವಾರದಂದು ಪಟ್ಟಣದ ಎಪಿಎಮ್‌ಸಿ ಆವರಣದಲ್ಲಿ ಕಾಂಗ್ರೆಸ ಮುಖಂಡ ಅರವಿಂದ ದಳವಾಯಿ ಅವರು ತಮ್ಮ ಸ್ವಂತ ಖರ್ಚಿನಿಂದ ಕೂಲಿ ಕಾರ್ಮಿಕರಿಗೆ ಹಾಗೂ ಬಡ ಮಹಿಳೆಯರಿಗೆ ದಿನಸಿ ಕಿಟ್ ವಿತರಣೆಗೆ ಚಾಲನೆ ನೀಡಿ ಮಾತನಾಡಿದ ಅವರು, ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವುಕುಮಾರ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಿರ್ದೇಶನದ ಮೇರೆಗೆ ಪಟ್ಟಣದ ವಿವಿಧ ವಾರ್ಡುಗಳಲ್ಲಿಯ ಹಾಗೂ ಅರಭಾವಿ ಕ್ಷೇತ್ರದ ವಿವಿಧ ಗಾಮಗಳಿಗೆ ತೆರಳಿ ಅಲ್ಲಿನ ಬಡವರಿಗೆ ದಿನಸಿ ಕಿಟ್ ವಿತರಿಸುವುದಾಗಿ ಹೇಳಿ, ನಾಳೆಯಿಂದ ಜಿಲ್ಲೆ ಅನ್‌ಲಾಕ್ ಆಗುತ್ತಿದೆ ಎಂದು ಮೈಮರೆಯದೆ ಸಾಮಾಜಿಕ ಅಂತರ ಕಾಪಾಡಿಕೊಂಡು ಮಾಸ್ಕ್ ಧರಿಸಿ ಜಾಗರೂಕರಾಗಿರಲು ಹೇಳಿದರು.

ಹಿರಿಯ ಕಾಂಗ್ರೆಸ ಮುಖಂಡ ಎಸ್ ಆರ್ ಸೋನವಾಲ್ಕರ,ಅರಭಾವಿ ಅಲ್ಪ ಸಂಖ್ಯಾತರ ಘಟಕದ ಅಧ್ಯಕ್ಷ ಸಲೀಂ ಇನಾಮದಾರ ಮಾತನಾಡಿ, ಕೊರೋನಾ ಮಹಾಮಾರಿಯಿಂದ ಇಡೀ ರಾಜ್ಯವೇ ತಲ್ಲಣಗೊಂಡಿದ್ದು, ಸಾರ್ವಜನಿಕರು ಯಾವುದೇ ಕಾರಣಕ್ಕೂ ಸಾಮಾಜಿಕ ಅಂತರ, ಮಾಸ್ಕ್ ಧಾರಣೆ ಮಾಡುವುದರ ಮೂಲಕ ತಮ್ಮ ಜೀವವನ್ನು ರಕ್ಷಿಸಿಕೊಳ್ಳಬೇಕು ಎಂದರು.

ಕಾoಗ್ರೆಸ ಕಾರ್ಯಕರ್ತರಾದ ಬಸವರಾಜ ಪಾಟೀಲ, ಹಸನಸಾಬ ಮುಗುಟಖಾನ, ವಿರುಪಾಕ್ಷಿ ಮುಗುಳಖೋಡ, ಶರೀಫ್ ಪಟೇಲ, ಗಿರೀಶ ಕರಡಿ, ಮಲೀಕ ಕಳ್ಳಿಮನಿ, ರವಿ ಮೂಡಲಗಿ, ರಾಜು ಅತ್ತಾರ, ಚನ್ನಯ್ಯಾ ನಿರ್ವಾನಿ, ಇರ್ಶಾದ ಪೈಲವಾನ, ರಾಬರ್ಟ ಮೂಡಲಗಿ, ಮದಾರಸಾಬ ಜಕಾತಿ, ಸಾಹೇಬ ಪೀರಜಾದೆ, ಮಲ್ಲಿಕಾರ್ಜುನ ಕಬ್ಬೂರ, ಮೈನೂದ್ದೀನ ಬಳಿಗಾರ, ರಮಜಾನ ಬಿಜಾಪೂರ, ರಾಹುಲ ಕಾಂಬಳೆ, ಕುಮಾರ ದೊಡಮನಿ ಉಪಸ್ಥಿತರಿದ್ದರು.

Share
WhatsApp
Follow by Email