
ಶನಿವಾರ ಸಂಜೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೈಲಹೊಂಗಲ ಹಾಗೂ ಕಿತ್ತೂರು ತಾಲೂಕಿನಲ್ಲಿ ಒಟ್ಟು 1401 ಜನರ ಮೇಲೆ ನಿಗಾವಹಿಸಲಾಗಿದೆ. ಬೆಳಗಾವಿ ಜಿಲ್ಲೆಯಲ್ಲಿ ಕೊರೊನಾ ಸೋಂಕಿಗೆ ಸಂಬoಧಿಸಿದoತೆ ಪ್ರಯೋಗಾಲಯಕ್ಕೆ ಕಳಿಸಲಾಗಿದ್ದ ಎಲ್ಲ ಮಾದರಿಗಳು ನೆಗೆಟಿವ್ ಬಂದಿವೆoದು ಜಿಲ್ಲಾದಿಕಾರಿ ಡಾ.ಎಸ್.ಬಿ.ಬೊಮ್ಮನಹಳ್ಳಿ ಸ್ಪಷ್ಟನೆ ನೀಡಿದ್ದಾರೆ. ಜನರು ಭಯ ಪಡುವ ಅವಶ್ಯಕತೆವಿಲ್ಲ. ಸುಳ್ಳ ಸುದ್ದಿಗಳಿಗೆ ಮರುಳಾಗಬೇಡಿ. ಸರಕಾರದ ಆದೇಶ ಪಾಲಿಸಿ ಮನೆಯಲ್ಲಿ ಇರಬೇಕೆಂದು ತಿಳಿಸಿದರು. ಅನಾವಶ್ಯಕವಾಗಿ ಹೊರಗಡೆ ತಿರುಗಾಡುವವರ ಮೇಲೆ ಕಠಿಣ ಕ್ರಮ ಜರುಗಿಸಲಾಗುತ್ತಿದೆ. ಈಗಾಗಲೇ ಎಲ್ಲ ಕಡೆಗಳಲ್ಲಿ ಚೆಕ್ ಪೊಸ್ಟಗಳನ್ನು ನಿರ್ಮಿಸಲಾಗಿದೆ. ರೈತರಿಗೆ ಅನಕೂಲವಾಗುವ ನಿಟ್ಟಿನಲ್ಲಿ ಬೆಳಗ್ಗೆ 8 ರಿಂದ 10ರವರೆಗೆ ತರಕಾರಿ, ಹಣ್ಣು ಹಂಪಲ್ಲ ಮಾರಾಟ ಮಾಡಲು ಅವಕಾಶ ಕಲ್ಪಿಸಲಾಗಿದೆ ಎಂದು ಅವರು ತಿಳಿಸಿದರು