ಅಥಣಿ ; ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣಕ್ಕೆ ಬಂದೋಬಸ್ತಗಾಗಿ ಆಗಮಿಸಿದ ಕೆ ಎಸ್ ಆರ್ ಪಿ ಸಿಬ್ಬಂದಿ ಮತ್ತು ಅಥಣಿ ಪೋಲಿಸ್ ಠಾಣೆಯ ಸಿಬ್ಬಂದಿಗೆ ಅಥಣಿ ಡಿ ವೈ ಎಸ್ ಪಿ ಎಸ್ ವಿ ಗಿರೀಶ್ ಕಡ್ಡಾಯವಾಗಿ ಮಾಸ್ಕ ಧರಿಸುವಂತೆ ಮನವಿ ಮಾಡಿದರಲ್ಲದೆ ತಾವೇ ಸ್ವತಃ ಸ್ಯಾನಿಟೈಜರ್ ಮತ್ತು ಮಾಸ್ಕ್ ವಿತರಣೆ ಮಾಡಿ ಶಾಂತಿ ಸುವ್ಯವಸ್ಥೆಗೆ ಅನುಕೂಲ ಕಲ್ಪಿಸಲು ಬಂದವರು ಆರೋಗ್ಯವಂತರಾಗಿ ಇದ್ದಾಗ ಮಾತ್ರ ಸರಿಯಾಗಿ ಕೆಲಸ ನಿರ್ವಹಿಸಲು ಸಾಧ್ಯ ಎಂದು ಕಿವಿಮಾತು ಹೇಳಿದರು ಈ ವೇಳೆ ಅಥಣಿ ಪೋಲಿಸ್ ಠಾಣೆ ಸಿಪಿಐ ಶಂಕರಗೌಡ ಪಾಟೀಲ ಮತ್ತು ಸಿಬ್ಬಂದಿ ಉಪಸ್ಥಿತರಿದ್ದರು.