![](http://kannadatoday.in/wp-content/uploads/2020/04/7MDL2A.jpg)
ಅರಬಾಂವಿ ಪಟ್ಟಣ ಪಂಚಾಯತಿ ವ್ಯಾಪ್ತಿಯಲ್ಲಿ ಕೆ.ಎಮ್.ಎಫ್ ದಿಂದ ಉಚಿತ ನಂದಿನಿ ಹಾಲನ್ನು ವಿತರಿಸಿ ಮಾತನಾಡಿದ ಅವರು, ಎಪ್ರೀಲ್ ೧೪ರವರೆಗೆ ತಾಲೂಕಿನ ಎಲ್ಲ ಪಟ್ಟಣ ಪಂಚಾಯತ ವ್ಯಾಪ್ತಿಯ ಬಡ ಕುಟುಂಬಗಳಿಗೆ ಉಚಿತವಾಗಿ ಒಂದು ಲೀಟರ್ ಹಾಲನ್ನು ವಿತರಿಸಲಾಗುತ್ತಿದೆ ಎಂದು ಹೇಳಿದರು.
ಅರಬಾವಿಯಲ್ಲಿ ಸಾವಿರ ಕುಟುಂಬಗಳು, ಕಲ್ಲೋಳಿಯಲ್ಲಿ ೭೫೦ ಕುಟುಂಬಗಳು ಮತ್ತು ನಾಗನೂರಿನಲ್ಲಿ ೭೦೦ ಕುಟುಂಬಗಳಿಗೆ ಒಂದು ಲೀಟರ್ ಹಾಲು ವಿತರಿಸುವಂತೆ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಸೂಚಿಸಿದ್ದಾರೆ, ಸಾಮಾಜಿಕ ಅಂತರ ಕಾಯ್ದುಕೊಂಡು ಬೆಳಿಗ್ಗೆ ಸ್ಲಂ ನಿವಾಸಿಗಳ ಮನೆ ಬಾಗಿಲಿಗೆ ನಂದಿನಿ ಹಾಲು ವಿತರಣೆ ಮಾಡುವ ಕಾರ್ಯ ಆರಂಭವಾಗಿದೆ ಎಂದು ಹೇಳಿದರು.
ಮುಖಂಡರಾದ ಶಂಕರ ಬಿಲಕುಂದಿ, ನಿಂಗಪ್ಪ ಕುರಬೇಟ, ಮುತ್ತೇಪ್ಪ ಜಲ್ಲಿ, ಗಣಪತಿ ಇಳಿಗೇರ, ರಮೇಶ ಮಾದರ, ರಾಯಪ್ಪ ಬಂಡಿವಡ್ಡರ, ಕುಮಾರ ಪೂಜೇರಿ, ಮುಖ್ಯಾಧಿಕಾರಿ ಕೆ.ಬಿ.ಬೆಣ್ಣಿ, ಪಟ್ಟಣ ಪಂಚಾಯತಿ ಸದಸ್ಯರು ಸೇರಿದಂತೆ ಹಲವರು ಉಪಸ್ಥಿತರಿದ್ದರು.
![](http://kannadatoday.in/wp-content/uploads/2020/04/7MDL2.jpg)
ನಾಗನೂರ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿಯೂ ಸಹ ಹಾಲು ವಿತರಣೆಯಲ್ಲಿ ಪ್ರಭಾ ಶುಗರ್ ನಿರ್ದೇಶಕ ಕೆ.ಎಸ್.ಪಾಟೀಲ, ಪಿ.ಎಲ್.ಬಬಲಿ, ಬಿಮನಗೌಡ ಹೊಸಮನಿ, ಬಸವರಾಜ ಹಳಿಗೌಡ್ರ, ಎನ್.ಎಸ್.ಎಫ್ ಅತಿಥಿಗೃಹದ ದಾಸಪ್ಪ ನಾಯಿಕ, ಮಾರುತ್ತಿ ಕರಬನ್ನವರ, ಗಂಗಪ್ಪ ಸುಲಧಾಳ, ದುಂಡಪ್ಪ ನಂದಗಾವಿ, ಮುಖ್ಯಾಧಿಕಾರಿ ರವಿ ರಂಗಸೂಬೆ ಸೇರಿದಂತೆ ಮತ್ತಿತರರು ಇದ್ದರು.