
ಸಂಸದ ಅಣ್ಣಾಸಾಹೇಬ ಜೊಲ್ಲೆ ಮಾತನಾಡಿ ಗ್ರಾಮದಲ್ಲಿ ಪಡಿತರ ವಿತರಣೆಯಲ್ಲಿ ಏನಾದರು ತೊಂದರೆ ಇದ್ದರೇ ನನ್ನ ಗಮನಕ್ಕೆ ತರಬೇಕು. ಜೊತೆಗೆ ಜನ್ ಧನ್ ಖಾತೆಗಳಿಗೆ ಹಣ ಜಮಾ ಆಗಿದಿಯೋ ,ಇಲ್ಲವೋ ಎಂಬ ಮಾಹಿತಿ ಪಡೆದು, ಕೊರೋನಾ ಹರಡಂತೆ ನೋಡಿಕೊಳ್ಳಲು ಅಧಿಕಾರಿಗಳಿಗೆ ಸೂಚಿಸಿದರು.
ಸಾರ್ವಜನಿಕರು ಅನಗತ್ಯವಾಗಿ ಮನೆಯಿಂದ ಹೊರಗೆ ಬರಬಾರದು, ನಿಮ್ಮ ಮನೆಗಳ ಸಮೀಪ ಗಾಡಿಗಳ ಮೂಲಕ ಪೂರೈಸುವ ವ್ಯವಸ್ಥೆ ಮಾಡಲಾಗಿದೆ. ಅಗತ್ಯ ವಸ್ತುಗಳನ್ನು ಕೊಳ್ಳುವಾಗ ಸಾಮಾಜಿಕ ಅಂತರ ಕಾಯ್ದುಕೊಳ್ಳಿ. ಆದಷ್ಟು ಮನೆಯಲ್ಲೇ ಇರಿ ಸುರಕ್ಷಿತವಾಗಿರಿ. ಎಲ್ಲಾ ಅಂಗನವಾಡಿ ಮತ್ತು ಆಶಾ ಕಾರ್ಯಕರ್ತರು ಸಹಕರಿಸಲು ವಿನಂತಿಸಿ, ಕೊರೋನಾ ವಿರುದ್ಧ ಹೋರಾಟದಲ್ಲಿ ಅವರುಗಳ ಶ್ರಮವನ್ನು ಶ್ಲಾಘಿಸಿದರು.
ಗ್ರಾಮದ ಸ್ವಚ್ಚತೆಗೆ ಆದ್ಯತೆ ನೀಡಬೇಕು,ಕ್ವಾರಂಟೈನ್ ಇದ್ದವರ ಬಗ್ಗೆ ಹೆಚ್ಚಿನ ನಿಗಾ ವಹಿಸಬೇಕು, ಕಿರಾಣಿ ಸಾಮಾನು, ತರಕಾರಿಗಳನ್ನು ಹೆಚ್ಚಿನ ಬೆಲೆಗೆ ಮಾರುತ್ತಿದ್ದರೆ ನನ್ನ ಗಮನಕ್ಕೆ ತರಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.ಜಿಲ್ಲೆಯಲ್ಲಿ ಕೊರೋನಾ ವಿರುದ್ಧ ಹೋರಾಡುತ್ತಿರುವ ವೈದ್ಯರು, ಕಾರ್ಯಕರ್ತೆಯರು, ಅಧಿಕಾರಿಗಳು ಹಾಗೂ ಸಿಬ್ಬಂದಿಗಳನ್ನು ಅಭಿನಂದಿಸಿದರು.
ಈ ಸಂದರ್ಭದಲ್ಲಿ ಚಿಕ್ಕೋಡಿ ತಹಶೀಲ್ದಾರರಾದ ಶ್ರಿ ಸುಭಾಷ ಸಂಪಗಾವಿ, ವೈದ್ಯಾಧಿಕಾರಿಗಳಾದ ಶ್ರೀ ಬಿ.ಎನ್.ಪಾಟೀಲ, ಪಿಡಿಓ ಶ್ರೀ ಮಹಾದೇವ ಬಾಕರೆ, ತಾಲೂಕ ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಶ್ರೀ ಕೆ.ಎಸ್.ಪಾಟೀಲ,ಪಿಎಸ್ಐ ಶ್ರೀ ಅಮೃತ ಹೊಸಮಣಿ ಹಾಗೂ ಪಂಚಾಯತ್ ಸದಸ್ಯರು, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತರು ಹಾಗು ಗಣ್ಯರು ಉಪಸ್ಥಿತರಿದ್ದರು.