
ಮೂವತ್ತೈದು ಜನರನ್ನು ವೈದ್ಯಕೀಯ ವರದಿ ನೆಗೆಟಿವ್ ಬಂದ ಹಿನ್ನೆಲೆಯಲ್ಲಿ ಸದ್ಯ ತಾಲ್ಲೂಕು ಆಡಳಿತ ಬಿಡುಗಡೆ ಮಾಡಿದೆ.
ಈ ಬಗ್ಗೆ ಮಾತನಾಡಿದ ಅಥಣಿ ತಹಶಿಲ್ದಾರ ದುಂಡಪ್ಪ ಕೋಮಾರ ತಾಲ್ಲೂಕು ಆಡಳಿತದ ನೇತೃತ್ವದಲ್ಲಿ ತಾಲ್ಲೂಕು ಪಂಚಾಯತಿ, ಪೋಲಿಸ್ ಇಲಾಖೆ, ಮತ್ತು ಆರೋಗ್ಯ ಇಲಾಖೆಯ ಸಹಭಾಗಿತ್ವದಲ್ಲಿ ಯಶಸ್ವಿ ಕ್ವಾರಂಟೈನ್ ಅವಧಿ ಪೂರೈಸಿದ ಮೂವತ್ತೈದು ಜನರನ್ನು ವೈದ್ಯಕೀಯ ಇಲಾಖೆಯ ವರದಿ ಆಧರಿಸಿ ಅವರ ಗ್ರಾಮಗಳಿಗೆ ಕಳುಹಿಸಲಾಗುತ್ತಿದೆ. ಅವರ ಮನೆಯಲ್ಲಿ ಮುಂದಿನ ಏಳು ದಿನಗಳ ಕಾಲ ಅವರು ಕ್ವಾರಂಟೈನ್ ಉಳಿಯಲಿದ್ದಾರೆ ವರದಿ ನೆಗೆಟಿವ್ ಬಂದ ಹಿನ್ನೆಲೆಯಲ್ಲಿ ಬಿಡುಗಡೆ ಮಾಡಿರುವದರಿಂದ ಗ್ರಾಮಸ್ಥರು ಭಯಪಡುವ ಅಗತ್ಯ ಇಲ್ಲ ಎಂದರು.
ಇನ್ನೂ ಕ್ವಾರಂಟೈನ್ ಅವಧಿ ಪೂರೈಸಿದ ಕಿರಣಗಿ ಗ್ರಾಮದ ದಾವಲ್ ಉಸ್ಮಾನ ಮುಲ್ಲಾ ಕಳೆದ ಮೇ 16 ರಂದು ಕೊಗನೊಳ್ಳಿ ಚೆಕ್ ಪೋಸ್ಟ್ ತಲುಪಿದ ನಮ್ಮನ್ನು ಅಥಣಿ ಪಟ್ಟಣದಲ್ಲಿ ಕ್ವಾರಂಟೈನ್ ಮಾಡಲಾಗಿತ್ತು ಈ ಅವಧಿಯಲ್ಲಿ
ಆರೋಗ್ಯ ಇಲಾಖೆಯ ಸಿಬ್ಬಂದಿ, ಅಡುಗೆ ಸಿಬ್ಬಂದಿ, ಪೋಲಿಸ್ ಅಧಿಕಾರಿಗಳು ಮತ್ತು ತಾಲ್ಲೂಕು ಪಂಚಾಯತ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳು ನಮ್ಮನ್ನು ಚೆನ್ನಾಗಿ ನೋಡಿಕೊಂಡರು ದೇವರ ದಯೆಯಿಂದ ಸದ್ಯ ನಮ್ಮ ವರದಿ ನೆಗೆಟಿವ್ ಬಂದಿದ್ದು ನಮ್ಮನ್ನು ಬಿಡುಗಡೆ ಮಾಡುತ್ತಿದ್ದಾರೆ ಎಂದರು.
ಈ ವೇಳೆ ಅಥಣಿ ಪಿಎಸ್ಐ ಕುಮಾರ ಹಾಡಕರ, ಅಥಣಿ ತಾಲ್ಲೂಕು ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿ ರವೀಂದ್ರ ಬಂಗಾರಪ್ಪನವರ, ಶಿರಸ್ತೆದಾರ ಎಮ್ ವಿ ಬಿರಾದಾರ, ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಬಿ ಎಸ್ ಯಾದವಾಡ, ಕಂದಾಯ ನಿರೀಕ್ಷಕ ತಮ್ಮಣ್ಣ ಕಲಾಟೆ, ಗ್ರಾಮಲೆಕ್ಕಾಧಿಕಾರಿ ಎಮ್ ಎಮ್ ಮಿರ್ಜಿ, ಸೇರಿದಂತೆ ಹಲವರು ಉಪಸ್ಥಿತರಿದ್ದರು.