ಕೊರೊನಾ ಸೋಂಕು ತಡೆಗಟ್ಟಲು ಕರ್ಫ್ಯೂ, ಲಾಕ್ ಡೌನ್ ಪರಿಗಣಿಸಿ : ಸುಪ್ರೀಂ ಕೋರ್ಟ್.

ಸಾಂದರ್ಭಿಕ ಚಿತ್ರ

ನವದೆಹಲಿ : ದೇಶದಲ್ಲಿ ತೀವ್ರಗತಿಯಲ್ಲಿ ಏರಿಕೆಯಾಗುತ್ತಿರುವ ಕೊರೊನಾ ಸೋಂಕು ಪ್ರಕರಣಗಳಿಗೆ ಕಡಿವಾಣ ಹಾಕಲು ‘ಸಾರ್ವಜನಿಕ ಹಿತಾಸಕ್ತಿ ದೃಷ್ಟಿ’ಯಿಂದ ಲಾಕ್‌ಡೌನ್‌ ಹೇರುವ ಸಾಧ್ಯತೆಗಳನ್ನು ಪರಿಶೀಲಿಸಬೇಕು ಎಂದು ಸರ್ವೋಚ್ಚ ನ್ಯಾಯಾಲಯವು ಸೋಮವಾರ ಕೇಂದ್ರ ಸರ್ಕಾರಕ್ಕೆ ತಿಳಿಸಿದೆ.
 https://amzn.to/33e4pqk

ಪೀಠದ ಅಧ್ಯಕ್ಷತೆ ವಹಿಸಿದ್ದ ನ್ಯಾಯಮೂರ್ತಿ ಡಿ.ವೈ ಚಂದ್ರಚೂಡ್‌ ಅವರು ಈ ಮಾತು ಹೇಳಿದರು. ಹೆಚ್ಚುತ್ತಿರುವ ಸೋಂಕಿನ ಹಿನ್ನೆಲೆಯಲ್ಲಿ ಭವಿಷ್ಯದ ಕಾರ್ಯಸೂಚಿ, ಕಾರ್ಯಕ್ರಮಗಳ ಕುರಿತು ಮೇ 10ರೊಳಗೆ ವರದಿ ಸಲ್ಲಿಸಬೇಕು ಎಂದು ಪೀಠ ಕೇಂದ್ರ, ರಾಜ್ಯ ಸರ್ಕಾರಗಳಿಗೆ ಸೂಚಿಸಿತು.
 
ಸೋಂಕು ತಡೆ ಕ್ರಮವಾಗಿ ವಿವಿಧ ರಾಜ್ಯಗಳಲ್ಲಿ ಕರ್ಫ್ಯೂಜಾರಿ ಸೇರಿದಂತೆ ಕೆಲವೊಂದು ನಿರ್ಬಂಧಗಳನ್ನು ವಿಧಿಸಿರುವಂತೆಯೇ ಸುಪ್ರೀಂ ಕೋರ್ಟ್ ಈ ಸಲಹೆ ನೀಡಿದೆ. ಸ್ವಯಂಪ್ರೇರಿತವಾಗಿ ಕೈಗೊಂಡ ಪ್ರಕರಣ ಕುರಿತು ಭಾನುವಾರ ಆದೇಶವನ್ನು ಬಿಡುಗಡೆ ಮಾಡಲಾಗಿದೆ.
 
‘ಲಾಕ್‌ಡೌನ್‌ನಿಂದಾಗುವ ಮುಖ್ಯವಾಗಿ ಸಮಾಜದ ನಿರ್ಲಕ್ಷ್ಯಿತ ಸಮುದಾಯಗಳ ಮೇಲೆ, ಒಟ್ಟಾಗಿ ಸಾಮಾಜಿಕ ಮತ್ತು ಆರ್ಥಿಕ ಪರಿಣಾಮಗಳ ಅರಿವು ನಮಗಿದೆ. ಒಂದು ವೇಳೆ ಲಾಕ್‌ಡೌನ್‌ ಅನ್ನು ಜಾರಿಗೊಳಿಸಿದರೆ, ಈ ವರ್ಗಗಳ ಅಗತ್ಯಗಳನ್ನು ಈಡೇರಿಸಲು ಸೂಕ್ತ ಕ್ರಮ ಜರುಗಿಸಬೇಕು‘ ಎಂದು ಸ್ಪಷ್ಟಪಡಿಸಿದೆ.
 
ಅಗತ್ಯ ಔಷಧಗಳು, ಆಮ್ಲಜನಕ ಮತ್ತು ಲಸಿಕೆಗಳನ್ನು ಖರೀದಿಸುವುದಕ್ಕೆ ಇರುವ ನೀತಿಯನ್ನು ಮರುಪರಿಶೀಲಿಸಬೇಕು ಎಂದು ಕೇಂದ್ರ ಸರ್ಕಾರಕ್ಕೆ ಸಲಹೆ ಮಾಡಿದ ಸುಪ್ರೀಂ ಕೋರ್ಟ್, ಆರೋಗ್ಯ ಆರೈಕೆ ಸಿಬ್ಬಂದಿ, ವೈದ್ಯರ ಕುಶಲವನ್ನು ಗಮನಿಸಬೇಕು ಎಂದು ಹೇಳಿದೆ.
 
‘ಇಂಥ ಸುರಕ್ಷತಾ ಕ್ರಮಗಳು ಕೇವಲ ವೈದ್ಯರಿಗಷ್ಟೇ ಅಲ್ಲ, ದಾದಿಯರು, ಆಸ್ಪತ್ರೆ ಸಿಬ್ಬಂದಿ, ಆಂಬುಲೆನ್ಸ್‌ ಸಿಬ್ಬಂದಿ, ಸ್ವಚ್ಚತಾ ಸಿಬ್ಬಂದಿ, ಚಿತಾಗಾರದಲ್ಲಿ ಕಾರ್ಯನಿರ್ವಹಿಸುವ ಸಿಬ್ಬಂದಿ ಹಿತವನ್ನು ಈ ಪಿಡುಗಿನ ಸಂದರ್ಭದಲ್ಲಿ ಗಮನಿಸಬೇಕು’ ಎಂದು ತಿಳಿಸಿತು.
ನ್ಯಾಯಮೂರ್ತಿಗಳಾದ ಎಲ್‌.ನಾಗೇಶ್ವರರಾವ್ ಮತ್ತ ಎಸ್.ರವೀಂದ್ರ ಭಟ್ ಸೇರಿದಂತೆ ಮೂವರ ಸದಸ್ಯರುಳ್ಳ ಪೀಠವು , ಆರೋಗ್ಯ ಕಾರ್ಯಕರ್ತರಿಗೆ ಜಾರಿಗೊಳಿಸಿದ್ದ ಪ್ರಧಾನಮಂತ್ರಿ ಗರೀಬ್ ಕಲ್ಯಾಣ್‌ ವಿಮಾ ಭದ್ರತೆ ಯೋಜನೆಯ ಅವಧಿಯನ್ನು ಒಂದು ವರ್ಷ ವಿಸ್ತರಿಸಿರುವುದನ್ನು ಗಣನೆಗೆ ತೆಗೆದುಕೊಂಡಿತು.
ಯೋಜನೆಯಡಿ 168 ವೈದ್ಯರು ಸೇರಿದಂತೆ ಕೇವಲ 287 ಜನರ ಕುಟುಂಬಗಳಿಗೆ ಸಂಬಂಧಿಸಿದ ಕ್ಲೇಮುಗಳನ್ನಷ್ಟೇ ಇತ್ಯರ್ಥಪಡಿಸಿರುವುದನ್ನೂ ಅದು ಉಲ್ಲೇಖಿಸಿದೆ.

ಆಮ್ಲಜನಕ ಕೊರತೆಯಿಂದ ಮೃತಪಟ್ಟ 24 ಜನರ ಸಾವಿಗೆ ರಾಜ್ಯ ಸರ್ಕಾರವೇ ಕಾರಣ : ಸಿದ್ದರಾಮಯ್ಯ.

ಕರ್ನಾಟಕ ವಿಧಾನ ಸಭಾ ವಿರೋಧ ಪಕ್ಷದ ನಾಯಕರು ಸಿದ್ದರಾಮಯ್ಯನವರು.

ಬೆಂಗಳೂರು : ಚಾಮರಾಜನಗರ ಜಿಲ್ಲಾ ಆಸ್ಪತ್ರೆಯಲ್ಲಿ ಆಮ್ಲಜನಕದ ಕೊರತೆಯಿಂದ 24 ಮಂದಿ ಕೋವಿಡ್ ರೋಗಿಗಳು ಮೃತಪಟ್ಟಿರುವುದಕ್ಕೆ ರಾಜ್ಯ ಸರ್ಕಾರವೇ ಹೊಣೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆರೋಪಿಸಿದರು.

ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ರಾಜ್ಯ ಸರ್ಕಾರದ ವೈಫಲ್ಯದಿಂದ 24 ಜನರು ಪ್ರಾಣ ಕಳೆದುಕೊಂಡಿದ್ದಾರೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಮತ್ತು ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಸುರೇಶ್ ಕುಮಾರ್ ನೇರವಾಗಿ ಘಟನೆಯ ಹೊಣೆ ಹೊತ್ತುಕೊಳ್ಳಬೇಕು. ಜಿಲ್ಲಾ ಉಸ್ತುವಾರಿ ಸಚಿವರು ತಕ್ಷಣ ರಾಜೀನಾಮೆ ನೀಡಬೇಕು’ ಎಂದು ಸಿದ್ದರಾಮಯ್ಯನವರು ಆಗ್ರಹಿಸಿದರು.

ಚಾಮರಾಜನಗರ ಜಿಲ್ಲೆಗೆ ಮೈಸೂರಿನಿಂದ ಆಮ್ಲಜನಕ ಪೂರೈಕೆಯಾಗುತ್ತದೆ. ಶುಕ್ರವಾರದಿಂದಲೇ ಸಮಸ್ಯೆ ಆರಂಭವಾಗಿತ್ತು. ಆದರೆ, ಸರ್ಕಾರ ಎಚ್ಚೆತ್ತುಕೊಂಡು ಕ್ರಮ ಜರುಗಿಸಲಿಲ್ಲ. ಸರ್ಕಾರದ ನಿರ್ಲಕ್ಷ್ಯದಿಂದ ದುರಂತ ಸಂಭವಿಸಿದೆ ಎಂದು ಸಿದ್ದರಾಮಯ್ಯ ದೂರಿದರು.
ಚಾಮರಾಜನಗರ ಜಿಲ್ಲೆಗೆ ಅಗತ್ಯಕ್ಕಿಂತಲೂ ಕಡಿಮೆ ಪ್ರಮಾಣದ ಆಮ್ಲಜನಕದ ಪೂರೈಕೆಯಾಗಿದೆ. ಘಟನೆಯ ಕುರಿತು ನ್ಯಾಯಾಂಗ ತನಿಖೆ ನಡೆಸಬೇಕು. ದುರಂತಕ್ಕೆ ಕಾರಣರಾದವರ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದರು

ಐಪಿಲ್ ಗೂ ಆಘಾತ ತಂದ ಕೋವಿಡ್ : ಚೆನ್ನೈ ಸೂಪರ್ ಕಿಂಗ್ಸ್ ನ ಇಬ್ಬರಿಗೆ ಪಾಸಿಟಿವ್.

ಚೆನ್ನೈ ಸೂಪರ್ ಕಿಂಗ್ಸ್ ತಂಡ

ನವದೇಹಲಿ : ದೇಶದಲ್ಲಿ ಕೋವಿಡ್ 19 ಸೋಂಕಿತರ ಸಂಖ್ಯೆ ಹೆಚ್ಚುತ್ತಿದ್ದಂತೆ ಐಪಿಎಲ್ ಮೇಲೂ ಆತಂಕ ಮೂಡಿಸಿದೆ. ಕೋಲ್ಕತ್ತಾ ನೈಟ್ ರೈಡರ್ಸ್ ನ ಇಬ್ಬರು ಆಟಗಾರರಿಗೆ ಕೋವಿಡ್ ಪಾಸಿಟಿವ್ ಆದ ಬೆನ್ನಲ್ಲೇ ಚೆನ್ನೈ ಸೂಪರ್ ಕಿಂಗ್ಸ್ ನ ಇಬ್ಬರು ಸದಸ್ಯರಿಗೆ ಕೋವಿಡ್ ಪಾಸಿಟಿವ್ ದೃಢವಾಗಿದೆ.

ಚೆನ್ನೈ ಸೂಪರ್ ಕಿಂಗ್ಸ್ ತಂಡದ ಸಿಇಓ ಕಾಶಿ ವಿಶ್ವನಾಥನ್ ಮತ್ತು ಬೌಲಿಂಗ್ ಕೋಚ್ ಲಕ್ಷ್ಮೀಪತಿ ಬಾಲಜಿ ಅವರಿಗೆ ಕೋವಿಡ್ ಸೋಂಕು ದೃಢವಾಗಿದೆ. ಅಷ್ಟೇ ಅಲ್ಲದೆ ತಂಡದ ಬಸ್ ಕ್ಲೀನರ್ ಕೂಡಾ ಕೋವಿಡ್ ಸೋಂಕಿಗೆ ಒಳಗಾಗಿದ್ದಾರೆ.

ರವಿವಾರ ತಂಡದ ಎಲ್ಲಾ ಸದಸ್ಯರಿಗೂ ಕೋವಿಡ್ ಪರೀಕ್ಷೆ ನಡೆಸಲಾಗಿತ್ತು. ಇಂದು ಇದರ ವರದಿ ಬಂದಿದ್ದು, ಯಾವುದೇ ಆಟಗಾರರಿಗೆ ಸೋಂಕು ದೃಢಪಟ್ಟಿಲ್ಲ.

ವರದಿ ಬರುತ್ತಿದ್ದಂತೆ ತಂಡದ ಅಭ್ಯಾಸವನ್ನು ರದ್ದು ಮಾಡಲಾಗಿದೆ. ಧೋನಿ ಬಳಗ ತನ್ನ ಮುಂದಿನ ಪಂದ್ಯವನ್ನು ರಾಜಸ್ಥಾನ್ ರಾಯಲ್ಸ್ ವಿರುದ್ಧ ಬುಧವಾರ ಆಡಲಿದೆ. ಆದರೆ ಈ ಪಂದ್ಯ ನಡೆಯುವ ಬಗ್ಗೆ ಇನ್ನೂ ಖಚಿತ ಮಾಹಿತಿ ಲಭ್ಯವಾಗಿಲ್ಲ.

ಕಳೆದ ವರ್ಷದ ಕೂಟದ ಆರಂಭದಲ್ಲಿ ಸಿಎಸ್ ಕೆ ತಂಡದ ಆರಂಭಿಕ ಆಟಗಾರ ರುತುರಾಜ್ ಗಾಯಕ್ ವಾಡ್ ಮತ್ತು ಬೌಲರ್ ದೀಪಕ್ ಚಹರ್ ಗೆ ಕೋವಿಡ್ ಸೋಂಕು ದೃಢವಾಗಿತ್ತು.


WhatsApp
Follow by Email